Opinion/Reflections

ಆಸೆಯೇ ದುಃಖಕ್ಕೆ ಮೂಲವೇ?

ನನ್ನ ಮಗನಿಗೆ ೫ ವರುಷವಾಗಿದ್ದಾಗ ಒಂದು ಆಟಿಕೆಗಾಗಿ ಬೇಡಿಕೆಯಿಟ್ಟ. ಅದನ್ನು ನಾವು ಕೊಡಿಸಿದೆವು. ಮಾರನೇ ದಿನವಷ್ಟೇ ಅದೇ ಸರಣಿಯಲ್ಲಿಯ ಇನ್ನೊಂದು ಬೊಂಬೆ ಬೇಕೆಂದು ಹಠ ಶುರುವಾಯಿತು. ವಿಷಯ ಮರೆಸುವ ನನ್ನ ಯಾವುದೇ ಮಾಮೂಲಿನ ತಂತ್ರಗಳು ನಿಷ್ಪ್ರಯೋಜಕವಾಗಿ ಸಣ್ಣ ಅಳುಕ ಮುಂದುವರೆಯಿತು.

ಎಲ್ಲ ಆಸೆಗಳನ್ನು ಪೂರೈಸಬೇಕೇ? ಪೂರೈಸಿದಂತೆ ಆಸೆಯ ಬಳ್ಳಿ ಬೆಳೆಯುತ್ತಲೇ ಹೋಗುತ್ತದೆಯೇ? ಯಾರಿಗೆ ದುಃಖ? ಯಾರಿಗೆ ಕೋಪ? ಯಾರಿಗೆ ಮರುಕ? ಮಗುವಿನ ಮನಸ್ಸನ್ನು ನೋಯಿಸದೆ, ವಾದ-ಪ್ರತಿವಾದಗಳಿಗೆ ಎಡೆ ಕೊಡದೆ, ಜೀವನದ ಪಾಠಗಳನ್ನು ಕಲಿಸುವುದು ಹೇಗೆ? "ಸುಳ್ಳು" ತಂದೆ-ತಾಯಿಗಳಿಗೆ ಸಮರ್ಥ ಅಸ್ತ್ರವಾದಿತೇ? ಇಂದಿನ "ಬಿಳಿ ಸುಳ್ಳು" ನಾಳೆ ಬೆಳೆದು ಮುಳ್ಳು ಆದೀತೆ? ಈ ಪ್ರಶ್ನೆಗಳ ಮೇಲೆ ಅನುಭವದ ವಿಚಾರಗಳನ್ನು ಹಂಚಿಕೊಂಡಿದ್ದಾರೆ ಶೃತಿ ಅರವಿಂದ್.

ಡುಮಿಂಗ : ಒಂದು ಅನಿಸಿಕೆ

ಮೊತ್ತ ಮೊದಲು ಕುತೂಹಲ ಕೆರಳಿಸುವುದು ಡುಮಿಂಗ ಅನ್ನುವ ಹೆಸರು. ಇಂಗ್ಲಿಷಿನಲ್ಲಿ Dummy, Idiot ಅಂತ ಅರ್ಥಗಳಿವೆ. ಕನ್ನಡದಲ್ಲಿ ಡುಮ್ಮ, ಡುಮ್ಮಣ್ಣ, ಡುಮ್ಮಿ, ಡುಮ್ಮಕ್ಕ ಅಂತ ಮುದ್ದಿನಿಂದ ಮಕ್ಕಳಿಗೆ ಕರೆಯುವ ವಾಡಿಕೆಯೂ ಇದೆ.

ಕನ್ನಡದ ಬಗ್ಗೆ ಅಭಿರುಚಿ ಮೂಡುವಂತೆ ಮಾಡುವುದೇ ಕನ್ನಡದ ಅಭಿವೃದ್ಧಿ

ಒಂದು ಭಾಷೆಯ ಬೆಳವಣಿಗೆ ಆಗಬೇಕು ಎಂದರೆ ಅದು ಆ ಭಾಷೆಯನ್ನು ಹೆಚ್ಚು ಹೆಚ್ಚು ಜನರು ಬಳಸಿದರೆ ಮಾತ್ರ ಸಾಧ್ಯವಿರುವುದು. ಬದಲಾಗಿ ಇನ್ನೊಂದು ಭಾಷೆಯನ್ನು ವಿರೋಧಿಸುವುದು, ಅನ್ಯ ಭಾಷೆಯನ್ನಾಡುವ ಜನರನ್ನು ವಿರೋಧಿಸುವುದು ಇದು ನಮಗೆ ನಮ್ಮ ಭಾಷೆ ಮತ್ತು ರಾಜ್ಯದ ಬಗ್ಗೆ ಇರುವ ಭಯವನ್ನು ಸೂಚಿಸುವುದೇ ವಿನಃ ಇದರಿಂದ ಯಾವುದೇ ಬದಲಾವಣೆ ಖಂಡಿತಾ ಆಗುವುದಿಲ್ಲ.

ರಾಷ್ಟ್ರೀಯ ಮತದಾರರ ದಿನ ಮತ್ತು ಪ್ರಜಾಪ್ರಭುತ್ವ

ಪ್ರಜಾಪ್ರಭುತ್ವದಲ್ಲಿ ದೃಢವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆಂದೂ, ಪ್ರತಿಯೊಂದು ಚುನಾವಣೆಯಲ್ಲಿ ನಿಭೀ೯ತರಾಗಿ ಮತ್ತು ಧರ್ಮ,ಜನಾಂಗ,ಜಾತಿ,ಮತ,ಭಾಷೆ ಅಥವಾ ಯಾವುದೇ ಪ್ರೇರೇಪಣೆ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆಂದೂ ಈ ಮೂಲಕ ಪ್ರತಿಜ್ಞೆ ಸ್ವೀಕರಿಸುತ್ತೇವೆ.

ಮೊಬೈಲ್

ಮೊಬೈಲ್ ಮಾನವನ ಅಗತ್ಯವನ್ನು ಪೂರೈಸುವ ಒಂದು ವಸ್ತುವೆ ಅಥವಾ ಅನಿವಾರ್ಯವೆ? ಬೆಳಿಗ್ಗೆ ಎದ್ದು ಮುಂದಿನ ಕಾರ್ಯಕ್ರಮವನ್ನು ನಿಗದಿ ಮಾಡುವುದರಿಂದ ಹಿಡಿದು, ರಾತ್ರಿ ಆತ್ಮೀಯರಿಗೆ ಗುಡ್ನೈಟ್ ಮೇಸೆಜ್ ಕಳುಹಿಸುವರೆಗೂ ಮೊಬೈಲ್ ಅಗತ್ಯವಾಗಿದೆ. ಇಂದು ಎಲ್ಲಾ ಹಳ್ಳಿಗಳಲ್ಲಿಯೂ ಒಬ್ಬರೆ ಮಾತನಾಡುವವರು ಅಲ್ಲಲ್ಲಿ ಸಿಗುತ್ತಾರೆ. ವ್ಯತ್ಯಾಸ ಇಷ್ಟೇ - ಅವರನ್ನು ಯಾರೂ ಮಳ್ಳ, ಹುಚ್ಚ ಎಂದು ಪರಿಗಣಿಸುವುದಿಲ್ಲ. ನಮ್ಮ ಪರಿಸರದಲ್ಲಿ ಇದ್ದ ಗುಬ್ಬಿಯಂತಹ ಹಲವಾರು ಪಕ್ಷಿ, ಕೀಟಗಳು ಸಂಪರ್ಕ ಕ್ರಾಂತಿಯಿಂದ ಮರೆಯಾಗಿವೆ. ಅದರಂತೆ ಮಾನವನ ಮೇಲೂ ಹಲವಾರು ದುಷ್ಪಪರಿಣಾಮಗಳು ಆಗುತ್ತಾ ಇದ್ದರೂ, ಏನು ಕಾಣಿಸುತ್ತಿಲ್ಲವಾಗಿವೆ. 

ವೀ ಅಪಾಯ!

ಇತ್ತೀಚೆಗೆ ಪರಿಚಿತ ಬಿಎಸ್ಎನ್ಎಲ್ ಅಧಿಕಾರಿಯೊಬ್ಬರು ಹೇಳುತ್ತಿದ್ದರು, "ನಮ್ಮ ಗ್ರಾಮೀಣ ಬ್ರಾಡ್ಬ್ಯಾಂಡ್ ಯೋಜನೆ ಜಾರಿಗೊಳ್ಳುವವರೆಗೆ ಈ ಪರಿ ಹಳ್ಳಿ ಮನೆಗಳಲ್ಲಿ ಕಂಪ್ಯೂಟರ್ ಗಳಿವೆ ಎಂಬುದೇ ಗೊತ್ತಿರಲಿಲ್ಲ" ಅವರದ್ದು ಹರ್ಷದ ಉದ್ಗಾರ‌. ಇನ್ನೊಂದು ರೀತಿಯಲ್ಲಿ ಯೋಚಿಸಿದರೆ ವೀ ಅಪಾಯ ನಮ್ಮ ಬೆನ್ನ ಹಿಂದೆಯೇ ಇದೆ!
ಏನಿದು ವೀ?

ಕನ್ನಡದ ಅಭಿವೃದ್ಧಿಗೆ ತೊಡಕಾಗಿರುವವರು ಯಾರು?

“ರಾಜ್ಯೋತ್ಸವ ದಿನವನ್ನು ನಾವು ತುಂಬಾ ಸಂಭ್ರಮದಿಂದ ಆಚರಿಸುವೆವು. ನಮ್ಮ ನಾಡು, ನುಡಿ ಸಂಸ್ಕೃತಿಯ ಬಗ್ಗೆ ಹೆಮ್ಮೆ ಪಟ್ಟುಕೊಳ್ಳುತ್ತಿರುವೆವು. ಈ ಆಚರಣೆಯ ಸಂದರ್ಭದಲ್ಲಿ ನಮ್ಮ ಕನ್ನಡ ಭಾಷೆಯ ಸ್ಥಿತಿ ಎಲ್ಲಿಗೆ ತಲುಪಿದೆ. ಇದಕ್ಕೆ ಯಾರು ಕಾರಣ, ನಮ್ಮ ಭಾಷೆಯ ಏಳ್ಗೆಗೆ ಪರಿಹಾರವೇನು ಎಂದು ನಾವು ಗಂಭೀರವಾಗಿ ಚಿಂತಿಸಲು ಇದು ಸಕಾಲವಾಗಿರುವುದು."