ಅನೇಕದಂತಾಲಂಕಾರ
ಅಸಾಧ್ಯವನ್ನು ಸಾಧ್ಯಗೊಳಿಸುವುದೆ ಕನ್ನಡ
ಅನೇಕದಂತಾಲಂಕಾರ
*** ವಿಶ್ವೇಶ್ವರ ದೀಕ್ಷಿತ
*** ವಿಶ್ವೇಶ್ವರ ದೀಕ್ಷಿತ
ಭಾಷೆ ಅಂದರೇನು? ಮಾತಾಡುವುದೊ? ಬರೆಯುವುದೊ? ನುಡಿಯೊ? ಲಿಪಿಯೊ? ಪದ ವಾಕ್ಯಗಳೋ? ಅರ್ಥವೋ? ಇವಾವೂ ಅಲ್ಲದ ಅಮೂರ್ತ ಸಂವಹನವೋ?
ಇಬ್ಬರ ನಡುವೆ ಭಾಷೆ ಬೇಕು. ಗಣಿತ, ವಿಜ್ಞಾನ, ಕಲೆ – ಯಾವುದಕ್ಕೂ ಭಾಷೆ ಬೇಕು. ಆಲೋಚಿಸಲೂ ಭಾಷೆ ಬೇಕು! ಅಂತೂ ಇದು ಮನುಷ್ಯನ ಬದುಕಿಗೆ, ಬಾಳಿಗೆ, ಉನ್ನತಿಗೆ ಅವಶ್ಯವಾದದ್ದು. ಹಾಗಾದರೆ ಭಾಷೆಯನ್ನು ಕಲಿಯುವುದು ಹೇಗೆ? ಒಂದು ಭಾಷೆಯನ್ನು ಕಲಿಯಲು ಮಾಧ್ಯಮವಾಗಿ ಇನ್ನೊಂದು ಭಾಷೆ ಅಗತ್ಯವೆ? ಸೂಕ್ತವಾದ ಮಾಧ್ಯಮ ಭಾಷೆ ಯಾವುದು?
[ಈ ಬಿತ್ತರಿಕೆಯಲ್ಲಿ ಕನ್ನಡ ಮತ್ತು ವಿಜ್ಞಾನ, ವಿಜ್ಞಾನ ಬರವಣಿಗೆ, ಕನ್ನಡದಲ್ಲಿ ವಿಜ್ಞಾನ ಬರೆಹದ ಸ್ಥಿತಿ ಈ ಅಂಶಗಳಣ್ನು ನಿಮ್ಮ ಗಮನಕ್ಕೆ ತಂದು, ವಿಜ್ಞಾನ ಕಲಿಕೆಗೆ ಕೆಲವು ಸೂಚನೆಗಳನ್ನು ನೀಡಲು ಪ್ರಯತ್ನಿಸಿದ್ದೇನೆ. ಎಂದಿನಂತೆ, ನಿಮ್ಮ ಕಮೆಂಟು, ಪ್ರಶ್ನೆ, ನಿರ್ಭಿಡೆಯ ಟೀಕೆಗಳಿಗೆ ಸ್ವಾಗತ.]
ನರ್ತನ: ಮಾಲತಿ ಅಯ್ಯಂಗಾರ್
ಮತ್ತು ಕಲಾವಿದರು;
ಗಾಯನ: ಕಲಾನಿಧಿ ವಿದ್ವಾನ್
ಶ್ರೀ ಆರ್.ಕೆ. ಶ್ರೀಕಂಠನ್;
ಪೂರ್ಣ ವಾಚನ
ಕನ್ನಡ ಬಲ್ಲವರಿಗೆ ಒಂದು ಪ್ರಶ್ನೆ
ಷ ಸಂಸ್ಕೃತದಿಂದ ಕನ್ನಡಕ್ಕೆ ಬಂದದ್ದು ಎಂದಾದರೆ, [ಅ।ಇ।ಎ]ಷ್ಟು ಪದಗಳ ಹುಟ್ಟು ಹೇಗೆ? ಕಿಟ್ಟೆಲ್ ಕೋಶದಲ್ಲಿ ೧೨ನೆ ಶತಮಾನದ ಶಬ್ದಮಣಿದರ್ಪಣ ಮತ್ತು ಬಸವಪುರಾಣಗಳನ್ನು ಉಲ್ಲೇಖಿಸಲಾಗಿದೆ. ಆದರೆ, ಕವಿರಾಜ ಮಾರ್ಗ, ಪಂಪ, ಮತ್ತು ರನ್ನರಲ್ಲಿ ಈ ಪದಗಳ ಪ್ರಯೋಗ ನನಗೆ ಕಾಣಲಿಲ್ಲ. ಇದಕ್ಕೆ ಏನಾದರೂ ಸುಲಭ ವಿವರಣೆ ಇದ್ದರೆ ನನಗೆ ಹೊಳೆಯುತ್ತಿಲ್ಲ.
ಯುಗಾದಿಯಿಂದ ಉಗಾದಿ ಬಂತೆ? ಉಗಾದಿಗೆ ಒಂದು ಸ್ವತಂತ್ರ ಹುಟ್ಟು ಇದೆಯೆ? ಭಾಷೆ ಬೆಳೆಯುವುದದಾದರೂ ಹೇಗೆ?
... ಸಾಯಂಕಾಲದ ಮಳೆ ಕಾಯ್ದ ರಸ್ತೆಯ ಮೇಲೆ ರಪರಪನೆ ಬಿದ್ದಾಗ, ಹೆಬೆ ಎದ್ದು, ದೂಳಿನ ಕಂಪನ್ನು ಮೂಗು ಹಿಗ್ಗಿಸುತ್ತ ಸವಿಯಲು ಕಾಯದವರು ಯಾರಿದ್ದಾರೆ! ಆ ದಿನದ ಆಗಮನವನ್ನು ಸಾರುವುದೇ ಉಗಾದಿ!