Culture

ಹಳೆ-ಹೊಸ ತಲೆಮಾರುಗಳ ನಡುವೆ ದೀಪಾವಳಿ ಸಂಭ್ರಮ

ಹಳೆ-ಹೊಸ ತಲೆಮಾರುಗಳ ನಡುವೆ ದೀಪಾವಳಿ ಸಂಭ್ರಮ
*** ವಿವೇಕ ಬೆಟ್ಕುಳಿ


ಆಧುನಿಕತೆ ಬೆಳೆದಂತೆ ನಮ್ಮ ಸಂಪ್ರದಾಯ, ನಂಬಿಕೆ, ಕುಟುಂಬ ವ್ಯವಸ್ಥೆ ಈ ಎಲ್ಲವುಗಳಲ್ಲಿ ಬದಲಾವಣೆಗಳು ಆಗುತ್ತಿವೆ. ಬದಲಾವಣೆಯೂ ಜಾಗತೀಕರಣದ ನಂತರದಲ್ಲಿ ಅತಿವೇಗದಿಂದ ಆಗುತ್ತಿರುವುದನ್ನು ಕಾಣಬಹುದಾಗಿದೆ. ಹಿಗೆಯೆ ಮುಂದುವರೆದರೆ ನಮ್ಮ ಮುಂದಿನ ಪೀಳಿಗೆಗೆ ಇಂದಿನ ಆಚರಣೆಗಳು ಕೇವಲ ಇತಿಹಾಸ ಏನಿಸಿಕೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲ. ಹಳೆ-ಹೊಸ ತಲೆಮಾರುಗಳ ಸಮ್ಮಿಲಿತ ಇಂದಿನ ಸಂದರ್ಭದಲ್ಲಿ ಹಬ್ಬಗಳನ್ನು ನಾವು ಸಂಭ್ರಮಿಸುತ್ತಿರುವುದು ವಿಶೇಷವಾಗಿದೆ.

ಮನ್ವಂತರದ ಮನುಜೆ: ಮೇರಿ ಕ್ಯೂರಿ

ನೊಬೆಲ್ ಬಿರುದಿಗೇ ಒಂದು ವಿಶಿಷ್ಟ, ವಿಶ್ವವ್ಯಾಪಿ ಪ್ರತಿಷ್ಠೆಯನ್ನು ತಂದು ಕೊಟ್ಟು, ಇತಿಹಾಸದಲ್ಲಿ ಅಮರಳಾಗಿ ನಿಂತ ಮೇರಿ ಕ್ಯೂರಿಯ ಜೀವನ್ಮಹಿಮೆಯು, ವಿಜ್ಞಾನಿಗಳಷ್ಟೇ ಅಲ್ಲ, ಸರ್ವರೂ, ಸರ್ವದಾ ಮೆಲುಕು ಹಾಕಬೇಕಾದಂಥ ಮಹಾರ್ಥಕ ಚರಿತೆ; “ಮಾನವನಾಗಿ ಹುಟ್ಟಿದ್ಮೇಲೆ ಏನೇನ್ ಓದ್ದೀ?” ಎಂದರೆ “ಮೇರಿ ಕ್ಯೂರಿ ಕತೆ ಓದಿದೆ!” ಎಂಬ ಹರ್ಷೋದ್ಗಾರವನ್ನು ಹೊರಪಡಿಸುವ, ಹುರಿಯುಕ್ಕಿಸುವಂಥ ವಿಷಯ.

ಗಾಂಧಿ ನಾಮದ ಬಲ

"ಹೆಸರಿನಲ್ಲೇನಿದೆ?" ಎಂದು ವಾದಿಸುವವರಿಗೆ "ಗಾಂಧಿ" ಎಂಬ ಒಂದೇ ಒಂದು ಪದ ಹೇಳಿದರೆ ಸಾಕು, ಸುಮ್ಮನಾಗುತ್ತಾರೆ. ಅಷ್ಟು ಅದರ ಮಹತ್ವ. ಗಾಂಧಿ ಎಂದು ಹೆಸರಿಟ್ಟುಕೊಂಡು, ಆ ಹೆಸರಿನಲ್ಲಿ ಏನೆಲ್ಲವನ್ನು ಸಾಧಿಸಬಹದು - ವಿಶೇಷವಾಗಿ ಸ್ವಾತಂತ್ರ್ಯಾನಂತರದಲ್ಲಿ. ಇದು ಹೇಗಾಯಿತು? ಗಾಂಧಿ ನಾಮದ ಚರಿತ್ರೆ ಏನು? ಮತ್ತಿತರ ಕುತೂಹಲಕಾರಿ ಮಾಹಿತಿಗಳನ್ನು ಹೆಕ್ಕಿ ನಿಮ್ಮ ಮುಂದೆ ಇಟ್ಟಿದ್ದಾರೆ ಮೈಸೂರಿನ ಶ್ರೀ ಸೀತಾರಾಮ್

ಕಲೆಯ ಕಲಿಕೆ - ಇಂದಿಗೆ ಬೇಕೇ?

"ಶಾಸ್ತ್ರೀಯ ಕಲೆಗಳು ಕಲಿಯಲು ಕಷ್ಟ, ಕೆಲವರಿಗಷ್ಟೇ ಸೀಮಿತ, ಈಗಿನ ತಂತ್ರಜ್ಞಾನದ ಯುಗದಲ್ಲಿ ಕೆಲಸಕ್ಕೆ ಬಾರದ್ದು; ಶಾಸ್ತ್ರೀಯ ಸಂಗೀತ ನೃತ್ಯಗಳನ್ನು ನೋಡೋರು ಯಾರು? ಕಲಿಯಲು ಸಮಯ ಎಲ್ಲಿದೆ?"  ಈ ಎಲ್ಲ ಪ್ರಶ್ನೆಗಳಿಗೆ ಸಮಾಧಾನಕರವಾಗಿ  ಉತ್ತರಿಸಿದ್ದಾರೆ;  ಕಲೆ ನಮ್ಮ ಬದುಕು, ಅನಿವಾರ್ಯ; ಕಲಿಕೆ ಅವಶ್ಯ ಮತ್ತು ಕರ್ತವ್ಯ ಎಂದು ತೋರಿಸಿ ಕೊಟ್ಟಿದ್ದಾರೆ ಸಂಗೀತ-ನೃತ್ಯ ಕಲಾವಿದೆ ಸಂಧ್ಯಾ ಮಹೇಶ್

ಕನ್ನಡದ ಅಭಿವೃದ್ದಿಗೆ ತೊಡಕಾಗಿರುವ ಅಂಶಗಳು

ವರ್ಷ ೨೦೦೦ದಲ್ಲಿ ಹುಟ್ಟು ಹಾಕಿದ ಕನ್ನಡ ಕಲಿಯ ಅಭಿಯಾನ ಫಲಪ್ರದವಾಗಿ ಮುಂದುವರೆಯುತ್ತಿದೆ. ವಿದೇಶಗಳಲ್ಲಿ ಕನ್ನಡ ಶಾಲೆಗಳು ಹುಟ್ಟುತ್ತಿದ್ದು ಕನ್ನಡ ಕಲಿಕೆ ಹೆಚ್ಚುತ್ತಿರುವುದು ಸ್ವಾಗತಾರ್ಹ. ಇದರಲ್ಲಿ ಕೇವಲ ಕನ್ನಡ ಪ್ರೀತಿ ಅಭಿಮಾನಗಳಿಂದ, ಮಕ್ಕಳನ್ನು ಕನ್ನಡ ಸಂಸ್ಕೃತಿಯಲ್ಲಿ ಬೆಳೆಸುವ ಹಂಬಲದಿಂದ ತಮ್ಮನ್ನು ಈ ಅಭಿಯಾನದಲ್ಲಿ ತೊಡಗಿಸಿಕೊಳ್ಳುತ್ತಿರುವ ತಂದೆ ತಾಯಂದಿರು ಸ್ತುತ್ಯಾರ್ಹರು. ಕನ್ನಡ ಕಾಯಕದ ಅಡಿಯಲ್ಲಿ, ಕರ್ನಾಟಕದಲ್ಲಿನ ಸರಕಾರಿ ಸಂಸ್ಥೆಗಳು ಮತ್ತು ಮಾಧ್ಯಮಗಳು ವಿದೇಶಗಳಲ್ಲಿನ ಕನ್ನಡದತ್ತ ತಮ್ಮ ದೃಷ್ಟಿಯನ್ನು ಕೇಂದ್ರೀಕರಿಸಿದ್ದಾರೆ. ಆದರೆ ಕರ್ನಾಟಕದಲ್ಲೇ ಕನ್ನಡದ ಸ್ಥಿತಿ ಚಿಂತನೀಯವಾಗಿರುವಾಗ, ಇದು ಬೇರಿಗೆ ಹುಳ ಹತ್ತಿರುವಾಗ ಹೂಗಳನ್ನು ಅರಳಿಸುವ ಅಥವಾ ಕೆಳಗೆ ತೂಗಾಡುತ್ತಿರುವ ಹಣ್ಣುಗಳನ್ನು ಬಾಚಿಕೊಳ್ಳುವ ಯತ್ನ ಎನ್ನಿಸುವುದು ಸಹಜ. ಹಾಗಾಗದಿರಲು, ಕರ್ನಾಟಕದಲ್ಲಿ ಕನ್ನಡದ ಅಭಿವೃದ್ಧಿ ಏಕೆ ಕುಂಠಿತವಾಗಿದೆ, ಅದಕ್ಕೆ ತೊಡಕಾಗಿರುವ ಅಂಶಗಳು ಯಾವವು, ಇವುಗಳನ್ನು ತಿಳಿದುಕೊಂಡರೆ ಸರಿಯಾದ ಪರಿಹಾರಗಳನ್ನು ರೂಪಿಸಿಕೊಳ್ಳಬಹುದು. ಈ ನಿಟ್ಟಿನಲ್ಲಿ ಶ್ರೀಯುತ ವಿವೇಕ ಅವರ ಲೇಖನ ಕಣ್ಣು ತೆರೆಸುವಂತಿದೆ.

ಮುಖ್ಯವಾಹಿನಿಗೆ ಬರಲು ಮಹಿಳೆಗೆ ಇರುವ ಅಡತಡೆಗಳೇನು?

“ಅನಾದಿ ಕಾಲದಿಂದಲೂ ಮಹಿಳೆಯನ್ನು ದ್ವೀತಿಯ ದಜೆ೯ ನಾಗರಿಕರಂತೆ ನೋಡಲಾಗಿದೆ. ಆಧುನಿಕ ಯುಗದಲ್ಲಿ ಮಹಿಳೆಗೆ ಸಮಾನವಾದ ಸ್ಥಾನ ಮಾನ ನೀಡಿರುವೆವು ಎಂದು ನಾವು ಅಂದುಕೊಂಡರೂ ಇನ್ನೂ ನಮ್ಮ ಸಮಾಜದಲ್ಲಿ ಹೆಚ್ಚಿನ ಜನರು ಮಹಿಳೆಯನ್ನು ಗೌರವಯುತವಾಗಿ ನೋಡುತ್ತಿಲ್ಲ.“
ಇದರ ಹಿಂದಿರುವ ಕಾರಣಗಳೇನು? ತೊಡಕುಗಳೇನು? ವಿಶ್ವ ಮಹಿಳಾ ದಿನ ಒಂದು ಟೊಳ್ಳು ಆಚರಣೆಯಾಗದಿರಲಿ ಎಂಬ ಆಶಯದಿಂದ ಇವುಗಳನ್ನು ಒಂದೊಂದಾಗಿ ಗುರುತಿಸಿದ್ದಾರೆ ವಿವೇಕ ಬೆಟ್ಕುಳಿ.

ಗಾಂಧಿ ಸಾಧಿಸಿದ್ದಾದರೂ ಏನು?

ಗಾಂಧಿಯನ್ನು ಕೆಲವರು ದೇವತೆಯಂತೆ ಪೂಜಿಸುವವರಾದರೆ ಇನ್ನು ಹಲವರು ಕ್ಷುಲ್ಲಕ ಕಾರಣಗಳಿಗಾಗಿ ಅವರ ಎಲ್ಲ ತತ್ವಗಳನ್ನು ಅನಾದರಣೆಯಿಂದ ನೋಡುವವರಿದ್ದಾರೆ. ಈ ಇಬ್ಬರೂ ಗಾಂಧಿಯನ್ನು ಅರಿತುಕೊಂಡಿಲ್ಲ.

ಅವನತಿಯತ್ತ ಭಾವನಾತ್ಮಕ ಸಂಬಂಧ : ಯಾಂತ್ರಿಕವಾಗುತ್ತಿರುವ ದೀಪಾವಳಿ ಆಚರಣೆ

[ಇಂದು, ಸಮಾಜ ಬೆಳಕಿನ ವೇಗದಲ್ಲಿ ಬದಲಾಗುತ್ತಿದೆ. ಕಾಲಕ್ಕೆ ತಕ್ಕಂತೆ ಹಬ್ಬಗಳ ಆಚರಣೆಗಳೂ ಬದಲಾಗುವುದು ಸಹಜ. ಆದರೆ ಭಾವನಾತ್ಮಕ ಬೆಸುಗೆಗಳು ಶಿಥಿಲವಾಗಿ, ಮಾನವೀಯ ಸಂಬಂಧಗಳು ಕಳಚುತ್ತ, ದೇಶವೇ ಒಂದು ದೊಡ್ಡ ವ್ಯವಹಾರವಾಗುತ್ತಿದೆ.  ಮುಂದಿನ ದಿನಗಳಲ್ಲಿ ಹಬ್ಬದ ಆಚರಣೆ ಸಂಪೂರ್ಣ ಯಾಂತ್ರಿಕವಾಗುವುದರಲ್ಲಿ ಅನುಮಾನ ಇಲ್ಲ. ಇದಕ್ಕೆ ಕಾರಣಗಳು ಏನು?   ಹಾಗಾಗದಂತೆ ನೋಡಿಕೊಳ್ಳುವ ಜವಾಬುದಾರಿ ಯಾರದು?]