ನುಡಿ

Language

ನಮ್ಮ ನಡುವಿದ್ದ ನಾಡೋಜ

ನಮ್ಮ ನಡುವಿದ್ದ ನಾಡೋಜ

[ ಇಂದು, ಡಿಸೆಂಬರ ೨೮, ಕನ್ನಡದ ಹೊಸ ಬೆಳಕು ಮೂಡಿದ ದಿನ. ಶ್ರೀನಿವಾಸ ಎಂಬ ಒಬ್ಬ ಹಳ್ಳಿಯ ಬಡ ಹುಡುಗ, ಹುಟ್ಟಿದ ದಿನ. ಎಲ್ಲ ಕಷ್ಟಗಳನ್ನೂ ಮೀರಿ, ತನ್ನ ಕಲಿಯುವ ಉತ್ಕಟತೆ, ಪುಸ್ತಕ ಪ್ರೇಮ, ಮತ್ತು ಹೊಸತನದ ಹಂಬಲಗಳಿಂದ ಒಬ್ಬ ಉತ್ಕೃಷ್ಟ ಸಂಶೋಧಕನಾಗಿ, ಸಂಶೋಧನೆಗೇ ಒಂದು ಹೊಸ ಆಯಾಮವನ್ನು ಜೋಡಿಸಿ, ನಾಡೋಜನಾಗಿ ಬೆಳೆದು ನಿಂತ ಕತೆ ಇದು. ಕನ್ನಡ ಕಲಿಗಳಿಗಷ್ಟೆ ಅಲ್ಲ,ಎಲ್ಲರಿಗೂ ಸ್ಫೂರ್ತಿ ನೀಡುವ,ಡಾ. ಶ್ರೀನಿವಾಸ ಹಾವನೂರರನ್ನು ಇದಕ್ಕಿಂತ ಹತ್ತಿರವಾಗಿ ಕಂಡು ಹೇಳಿದ ಕತೆ ನಿಮಗೆ ಬೇರೆ ಎಲ್ಲಿಯೂ ಸಿಗದು. – ಸಂ.]

ಬರವಣಿಗೆಯಲ್ಲಿ ಮತ್ತು ಉಚ್ಚಾರದಲ್ಲಿ ಭಾಷಾ ಶುದ್ಧಿಯ ವಿಚಾರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೆಲೆಸಿರುವ ಕೆ.ಟಿ. ಗಟ್ಟಿ ಚಿಂತನಶೀಲ ಬರಹಗಾರರು. ಭಾಷೆಯ ಕಲಿಕೆ, ಉಳಿವು, ಅಳಿವು, ಮತ್ತು ಬೆಳವಣಿಗೆಗಳಲ್ಲಿ ಇವರಿಗೆ ಆಸಕ್ತಿ. ಕಾದಂಬರಿ, ಕಥೆ, ಕವನ, ಪ್ರಬಂಧ, ಪ್ರವಾಸ ಕಥನ ಇತ್ಯಾದಿ ಐವತ್ತಕ್ಕು ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಹದಿನೇಳನೆಯ ವಯಸ್ಸಿನಲ್ಲೆ ಅಧ್ಯಾಪಕರಾಗಿ ಸುಮಾರು ನಲವತ್ತು ವರ್ಷಗಳ ಅನುಭವ ಹೊಂದಿದ್ದಾರೆ. ಆದನ್ನೆ ಈಗ ಕನ್ನಡ ಕಲಿಸುವವರಿಗೆ ಕಿವಿಮಾತಾಗಿ ಹಂಚಿಕೊಂಡಿದ್ದಾರೆ

ಕನ್ನಡ ಕಲಿಗಾಗಿ ಬರೆದ ಈ ವಿಶೇಷ ಲೇಖನದಲ್ಲಿ ೧೧ವಿಚಾರಗಳನ್ನು ಹರವಿದ್ದಾರೆ. ‘ನುರಿತ’ ಬರಹಗಾರರೂ ಸಾಮಾನ್ಯವಾಗಿ ಎಸಗುವ ಈ ಅನೇಕ ಪ್ರಮಾದಗಳನ್ನು ಕನ್ನಡ ಕಲಿಗಳು ಗಮನಿಸುವುದು ಅವಶ್ಯ. ಓದಿ ನೋಡಿ; ನಿಮ್ಮ ವಿಚಾರ ಏನು ಬರೆದು ತಿಳಿಸಿ.

ಕೆ.ಟಿ. ಗಟ್ಟಿ - ಕನ್ನಡದ ಬಂಗಾರ ಗಟ್ಟಿ

[ಹೊಸ ವಿಷಾದನೀಯ ಸುದ್ದಿ: ಜುಲೈ ೨೨, ೧೩೮ರಂದು ಜನಿಸಿದ, ಕೆ.ಟಿ.ಗಟ್ಟಿ ಅವರು ಫೆಬ್ರುವರಿ ೧೯, ೨೦೨೪ರಂದು ಮಂಗಳೂರಿನಲ್ಲಿ ತಮ್ಮ ೮೫ನೆ ವಯಸ್ಸಿನಲ್ಲಿ ನಿಧನರಾದರು.]

ಭಾಷೆ, ಲಿಪಿ, ಮತ್ತು ಕಲಿಕೆ – ಒಂದು ವಿಶ್ಲೇಷಣೆ

ಭಾಷೆ ಅಂದರೇನು? ಮಾತಾಡುವುದೊ? ಬರೆಯುವುದೊ? ನುಡಿಯೊ? ಲಿಪಿಯೊ? ಪದ ವಾಕ್ಯಗಳೋ? ಅರ್ಥವೋ? ಇವಾವೂ ಅಲ್ಲದ ಅಮೂರ್ತ ಸಂವಹನವೋ?
 
ಇಬ್ಬರ ನಡುವೆ ಭಾಷೆ ಬೇಕು. ಗಣಿತ, ವಿಜ್ಞಾನ, ಕಲೆ – ಯಾವುದಕ್ಕೂ ಭಾಷೆ ಬೇಕು. ಆಲೋಚಿಸಲೂ ಭಾಷೆ ಬೇಕು! ಅಂತೂ ಇದು ಮನುಷ್ಯನ ಬದುಕಿಗೆ, ಬಾಳಿಗೆ, ಉನ್ನತಿಗೆ ಅವಶ್ಯವಾದದ್ದು. ಹಾಗಾದರೆ ಭಾಷೆಯನ್ನು ಕಲಿಯುವುದು ಹೇಗೆ? ಒಂದು ಭಾಷೆಯನ್ನು ಕಲಿಯಲು ಮಾಧ್ಯಮವಾಗಿ ಇನ್ನೊಂದು ಭಾಷೆ ಅಗತ್ಯವೆ? ಸೂಕ್ತವಾದ ಮಾಧ್ಯಮ ಭಾಷೆ ಯಾವುದು? 

ಕನ್ನಡ ಮತ್ತು ವಿಜ್ಞಾನದ ಕಲಿಕೆ

[ಈ ಬಿತ್ತರಿಕೆಯಲ್ಲಿ ಕನ್ನಡ ಮತ್ತು ವಿಜ್ಞಾನ, ವಿಜ್ಞಾನ ಬರವಣಿಗೆ, ಕನ್ನಡದಲ್ಲಿ ವಿಜ್ಞಾನ ಬರೆಹದ ಸ್ಥಿತಿ ಈ ಅಂಶಗಳಣ್ನು ನಿಮ್ಮ ಗಮನಕ್ಕೆ ತಂದು, ವಿಜ್ಞಾನ ಕಲಿಕೆಗೆ ಕೆಲವು ಸೂಚನೆಗಳನ್ನು ನೀಡಲು ಪ್ರಯತ್ನಿಸಿದ್ದೇನೆ. ‌ ಎಂದಿನಂತೆ, ನಿಮ್ಮ ಕಮೆಂಟು, ಪ್ರಶ್ನೆ, ನಿರ್ಭಿಡೆಯ ಟೀಕೆಗಳಿಗೆ ಸ್ವಾಗತ.]

(ಇ + ಅ)ಷ್ಟು = ಎಷ್ಟು? ಮೂಲ ಸಂಸ್ಕೃತವೋ ಕನ್ನಡವೋ?

ಕನ್ನಡ ಬಲ್ಲವರಿಗೆ ಒಂದು ಪ್ರಶ್ನೆ
ಷ ಸಂಸ್ಕೃತದಿಂದ ಕನ್ನಡಕ್ಕೆ ಬಂದದ್ದು ಎಂದಾದರೆ, [ಅ।ಇ।ಎ]ಷ್ಟು ಪದಗಳ ಹುಟ್ಟು ಹೇಗೆ? ಕಿಟ್ಟೆಲ್ ಕೋಶದಲ್ಲಿ ೧೨ನೆ  ಶತಮಾನದ ಶಬ್ದಮಣಿದರ್ಪಣ ಮತ್ತು ಬಸವಪುರಾಣಗಳನ್ನು ಉಲ್ಲೇಖಿಸಲಾಗಿದೆ.   ಆದರೆ, ಕವಿರಾಜ ಮಾರ್ಗ, ಪಂಪ, ಮತ್ತು ರನ್ನರಲ್ಲಿ ಈ ಪದಗಳ ಪ್ರಯೋಗ ನನಗೆ ಕಾಣಲಿಲ್ಲ. ಇದಕ್ಕೆ ಏನಾದರೂ  ಸುಲಭ ವಿವರಣೆ ಇದ್ದರೆ ನನಗೆ ಹೊಳೆಯುತ್ತಿಲ್ಲ.