Opinion/Reflections

ಹುಚ್ಚರಣೆ: ದಾಸರನ್ನು ಆಡಿ ಕೊಲ್ಲಿರೋ! ಮತ್ತು ಕನ್ನಡದ ಏಳು ಅಪಸ್ವರಗಳು

[ ಕನ್ನಡವೆಂಬುದು ಮಂತ್ರ ಕಣಾ!
ಹೌದು. ಕನ್ನಡ ಉಚ್ಚಾರ ಸೂಕ್ಷ್ಮವಾದದ್ದು. ಉಚ್ಚಾರದಲ್ಲಿ ನಿಖರತೆ, ಸ್ಪಷ್ಟತೆ, ಒತ್ತು, ಬಿಗಿ, ಮತ್ತು ವಿರಾಮಗಳು ಅವಶ್ಯ. ಉಚ್ಚಾರ ಸರಿ ಇರದಿದ್ದರೆ, ಯಾವ ವೃತ್ತಾಸುರ ಉದ್ಭವಿಸದಿದ್ದರೂ, ಅಪಾರ್ಥ, ಅನಾಹುತ, ಆಭಾಸ, ಇಲ್ಲವೆ ನಗೆಪಾಟಲು ಕಟ್ಟಿಟ್ಟ ಬುತ್ತಿ. - ಸಂ.]

ಅಪೇಕ್ಷೆ ಇಲ್ಲದೆ ಪ್ರೀತಿಸಲು ಸಾಧ್ಯವೇ?

[ ಮನುಷ್ಯ ಜಾತಿಗೆ ವಿಶಿಷ್ಟವಾದವುಗಳಲ್ಲಿ ಪ್ರೀತಿ ಕೂಡ ಒಂದು. ಪ್ರೀತಿ ಎಂದರೆ ಏನು? ಪ್ರೀತಿ ಒಂದು ಅನುಭವ. ಭೌತಿಕ, ಮಾನಸಿಕ, ಮತ್ತು ಅಧ್ಯಾತ್ಮಿಕ ಸ್ತರಗಳಲ್ಲಿ, ಅವರವರ ಪ್ರೀತಿ ಅವರವರ ಅನುಭವಕ್ಕೆ ಸೀಮಿತ. ಸಾರ್ವತ್ರಿಕವಾಗಿ ಅದು ಹೀಗೇ ಇರಬೇಕು ಎಂದು ಹೇಳಲಾಗುವುದಿಲ್ಲ. ಆದರೂ, ಪ್ರೀತಿಗೂ ಅಪೇಕ್ಷೆಗೂ ನಂಟು ಸಹಜ. ಪ್ರೀತಿಯ ಬಗ್ಗೆ ಅನೇಕ ವಾದಗಳು ಇವೆ. ಅಪೇಕ್ಷೆಯೇ ಪ್ರೀತಿ ಎಂದು ಒಂದು ಸಾಧಿಸಿದರೆ ನಿರಪೇಕ್ಷ ಪ್ರೀತಿಯೇ ಪ್ರೀತಿ ಎನ್ನುತ್ತದೆ ಮತ್ತೊಂದು. ಅಲ್ಲದೆ, "ಪ್ರೀತಿ ಒಂದು ಹುಚ್ಚು ಚಟ" ಎಂದು ಹೇಳುತ್ತಾನೆ ಮಂಕುತಿಮ್ಮ. ನಿಮ್ಮ ಪ್ರೀತಿ ಎಂಥದ್ದು? ನಿಮ್ಮ ಅಪೇಕ್ಷೆಗಳೇನು? ವಿವೇಕ ಬೆಟ್ಕುಳಿ ಅವರ ಈ ಪ್ರೀತಿ ಲೇಖನವನ್ನು ಓದಿ, ಅವರ ದನಿಯಲ್ಲೆ ಕೇಳಿ; ಪ್ರೀತಿಯ ಮೂಲವನ್ನು ಕಂಡುಕೊಳ್ಳಿ- ಸಂ.]

ಸ್ತ್ರೀ ಸಂವೇದನೆ ಮತ್ತು ಸ್ತ್ರೀತ್ವ ವಾದ

ಸ್ತ್ರೀಯನ್ನು ದೇವತೆ ಎಂದೂ, "ಮಾತೃ ದೇವೋ ಭವ" ಎಂದೂ ಕರೆದ ಸನಾತನ ಧರ್ಮ ಅದೇ ಉಸುರಿನಲ್ಲಿ "ನ ಸ್ತ್ರೀ ಸ್ವಾತಂತ್ರ್ಯಮರ್ಹತಿ" ಎಂದೂ ಗಂಡ ತೀರಿದ ಹೆಣ್ಣು ಮುಂಡೆ ಎಂದೂ ಘೋಷಿಸುತ್ತದೆ. ಕಾಲ ಬದಲಾಗಿದೆ. ಹೆಣ್ಣು ಮಕ್ಕಳು ಈಗ ವಿದ್ಯಾವಂತರಾಗಿದ್ದಾರೆ, ಸರಿ ಸುಮಾರಾಗಿ ಕೆಲಸ ಮಾಡುತ್ತಿದ್ದಾರೆ, ಆರ್ಥಿಕವಾಗಿ ಸುಧಾರಿಸಿದ್ದಾರೆ. ಆದರೂ, ಕೌಟುಂಬಿಕ ಮತ್ತು ಸಾಮಾಜಿಕ ವಲಯಗಳಲ್ಲಿ ಅಸಮಾನಳು, ದೌರ್ಜನ್ಯಪೀಡಿತಳು.‌ ಹೊಣೆ ಹೆಚ್ಚಾಗಿದೆ; ಅದಕ್ಕೆ ತಕ್ಕಂತೆ ನೆಮ್ಮದಿ ಸಿಗುತ್ತಿಲ್ಲ. ಸ್ತ್ರೀ-ಪುರುಷರ ಅ-ಸಮೀಕರಣಗಳಲ್ಲಿ ತೃತೀಯ ಲಿಂಗವೂ ಸೇರಿ ಸಮಸ್ಯೆಯನ್ನು ತೊಡಕುಗೊಳಿಸಿದೆ. ಇದಕ್ಕೆ ಉತ್ತರ ಎನ್ನುವಂತೆ ಸ್ತ್ರೀತ್ವವಾದ ಮುಂದೆ ಬಂದಿದೆ. ಏನಿದು? ಇಲ್ಲಿ ಶ್ರೀನಿವಾಸ ಭಟ್ಟರು ಹೇಳುವ, ಸ್ತ್ರೀತ್ವ ಮತ್ತು ಸ್ತ್ರೀ ಸಂವೇದನೆಗಳ ಸಮ್ಮಿಶ್ರಣವೆ ಸುಖ ಶಾಂತಿ ಸಮೃದ್ಧಿಗಳಿಗೆ ಸಮರ್ಪಕ ರಸಾಯನವೆ? ಸಮೀಕರಣ ಸಾಧ್ಯವೆ? ಸಮತ್ವ ಸಾಧುವೆ? - ಸಂ

ಗುರಿ ತಪ್ಪುತ್ತಿರುವ ಗುರುಗಳಿಂದ ಗುರುಕುಲಕ್ಕೇ ಅವಮಾನ

ಎಲ್ಲ ಶಿಕ಼ಕರೂ ಹೀಗಲ್ಲ ಅಂತ ಸಮಸ್ಯೆಯನ್ನೆ ತೊಡೆದು ಹಾಕುವುದು ಸರಿ ಅಲ್ಲ.  ಶೈಕ್ಷಣಿಕ ಕೊರತೆ, ಅವಕಾಶ ವಂಚನೆ, ಅನ್ಯಾಯ, ಅಥವ ಅನಾಹುತ ಒಂದೇ ಮಗುವಿಗೆ ಆದರೂ ಅದು ಸಮಾಜದ ಸೋಲು.

ಮುಗ್ಧ ಮನಸ್ಸುಗಳ ಸಾಕ್ಷಾತ್ಕಾರವೇ ಸಾಕೇತ ಸಿದ್ಧಾಂತ, ಒಂದು ಸಂದೇಶ

[ಮೊನ್ನೆ ತಾನೆ ಕನ್ನಡ ಕಲಿಯ ಬಿತ್ತರಿಕೆ ಬಿಕಾಸ ೧೧-೨೦೨೩-೦೧ರಲ್ಲಿ ನಿಮಗೆ ಪರಿಚಯಿಸಿದ ಸಾಕೇತ ಸಿದ್ದಾಂತಕ್ಕೆ ಸ್ಪಂದಿಸಿ ಒಂದು ಸಂದೇಶವನ್ನು, ಲಲಿತ ಪ್ರಬಂಧವನ್ನು ಅನ್ನಿ, ಕಳಿಸಿದ್ದಾರೆ ರೂಪ ಮಂಜುನಾಥ. ಕರ್ನಾಟಕ ಸಾಂಸ್ಕೃತಿಕ ಸಂಘದ ಸುವರ್ಣ ಮಹೋತ್ಸವ‌ ಕಾರ್ಯಕ್ರಮದ ಕವಿಗೋಷ್ಠಿಯಲ್ಲಿ, ಕವನ ಓದಿದ ಮಕ್ಕಳ ಬಗ್ಗೆ, ಅವರನ್ನು ಬೆಳೆಸಿದ ತಾಯಿ ತಂದೆಯರ ಬಗ್ಗೆ, ಅರಳು ಮಲ್ಲಿಗೆ ಮತ್ತು ಗೋಕುಲ ಮಕ್ಕಳು ಎನ್ನುವ ಪುಟ್ಟ ಕನ್ನಡ ಸಾಂಸ್ಕೃತಿಕ ಸಮುದಾಯಗಳ ಬಗ್ಗೆ, ಹಾಗೂ ಸಾಕೇತ ಸಿದ್ಧಾಂತರ ಕವನಗಳನ್ನು ಪ್ರಕಟಿಸಿದ ಕನ್ನಡ ಕೂಟದ ಸ್ಮರಣ ಸಂಚಿಕೆಯ ಬಗ್ಗೆ,  ತಮ್ಮ ಅನಿಸಿಕೆಗಳನ್ನು ಇಲ್ಲಿ ತೆರೆದಿಟ್ಟಿದ್ದಾರೆ. ]

ಕನ್ಸಡಕ್ಕೊಂದು ಸಾಕೇತ ಸಿದ್ಧಾಂತ

ಕನ್ನಡಕ್ಕೊಂದು

ಸಾಕೇತ ಸಿದ್ಧಾಂತ

ಏನಿದು ಸಾಕೇತ ಸಿದ್ಧಾಂತ?‌
ಕನ್ನಡ ಕೇವಲ ಒಂದು ವ್ಯಾವಹಾರಿಕ ಮಾಧ್ಯಮವೋ?‌ ಆಥವ ಅದಕ್ಕಿಂತ ಮಿಗಿಲಾದ ಮೌಲ್ಯ ಏನಾದರೂ ಅದರಲ್ಲಿ ಇದೆಯೆ? ಕನ್ನಡ ಕಲಿಯಲು ಅತ್ಯಂತ ಪರಿಣಾಮಕಾರಿ ವಿಧಾನ ಯಾವುದು?

 

ಅಸ್ಥಿರವಾಗುತ್ತಿರುವ ಕುಟುಂಬ ವ್ಯವಸ್ಥೆ

ದೇಶ ಅಭಿವೃದ್ಧಿ ಆದಂತೆ, ಸಾಮಾಜಿಕ ಮತ್ತು ಕೌಟುಂಬಿಕ ವ್ಯವಸ್ಥೆ ಶಿಥಿಲವಾಗಿ ಹಲವು ಸಂಪ್ರದಾಯಗಳು ಮೊಟಕುಗೊಂಡರೆ ಇನ್ನು ಕೆಲವು ಸಂಪೂರ‍್ಣ ಮಾಯವಾಗುವವು.  ಇದು ಅನಿವಾರ್ಯವೆ? ಸಂಪ್ರದಾಯಗಳ ಉದ್ದೇಶಗಳನ್ನು ಅರಿತು ಮೂಲಭೂತ ಅಂಶಗಳನ್ನು ಉಳಿಸಿಕೊಂಡು, ಅರ್ಥಪೂರ್ಣವಾಗಿ ಆಚರಿಸಲು ಸಾಧ್ಯವೆ? ಈ ನಿಟ್ಟಿನಲ್ಲಿ, ಇಂಥ ಪರಿಸ್ಥಿತಿಗೆ ನಾವು ಬಂದು ಮುಟ್ಟಿರುವ ಕಾರಣಗಳನ್ನು ಕೆದಕಿ ನೋಡುವುದು ಅವಶ್ಯ.

ಕಲೆಯ ಕಲಿಕೆ - ಇಂದಿಗೆ ಬೇಕೇ?

"ಶಾಸ್ತ್ರೀಯ ಕಲೆಗಳು ಕಲಿಯಲು ಕಷ್ಟ, ಕೆಲವರಿಗಷ್ಟೇ ಸೀಮಿತ, ಈಗಿನ ತಂತ್ರಜ್ಞಾನದ ಯುಗದಲ್ಲಿ ಕೆಲಸಕ್ಕೆ ಬಾರದ್ದು; ಶಾಸ್ತ್ರೀಯ ಸಂಗೀತ ನೃತ್ಯಗಳನ್ನು ನೋಡೋರು ಯಾರು? ಕಲಿಯಲು ಸಮಯ ಎಲ್ಲಿದೆ?"  ಈ ಎಲ್ಲ ಪ್ರಶ್ನೆಗಳಿಗೆ ಸಮಾಧಾನಕರವಾಗಿ  ಉತ್ತರಿಸಿದ್ದಾರೆ;  ಕಲೆ ನಮ್ಮ ಬದುಕು, ಅನಿವಾರ್ಯ; ಕಲಿಕೆ ಅವಶ್ಯ ಮತ್ತು ಕರ್ತವ್ಯ ಎಂದು ತೋರಿಸಿ ಕೊಟ್ಟಿದ್ದಾರೆ ಸಂಗೀತ-ನೃತ್ಯ ಕಲಾವಿದೆ ಸಂಧ್ಯಾ ಮಹೇಶ್

ಕನ್ನಡದ ಅಭಿವೃದ್ದಿಗೆ ತೊಡಕಾಗಿರುವ ಅಂಶಗಳು

ವರ್ಷ ೨೦೦೦ದಲ್ಲಿ ಹುಟ್ಟು ಹಾಕಿದ ಕನ್ನಡ ಕಲಿಯ ಅಭಿಯಾನ ಫಲಪ್ರದವಾಗಿ ಮುಂದುವರೆಯುತ್ತಿದೆ. ವಿದೇಶಗಳಲ್ಲಿ ಕನ್ನಡ ಶಾಲೆಗಳು ಹುಟ್ಟುತ್ತಿದ್ದು ಕನ್ನಡ ಕಲಿಕೆ ಹೆಚ್ಚುತ್ತಿರುವುದು ಸ್ವಾಗತಾರ್ಹ. ಇದರಲ್ಲಿ ಕೇವಲ ಕನ್ನಡ ಪ್ರೀತಿ ಅಭಿಮಾನಗಳಿಂದ, ಮಕ್ಕಳನ್ನು ಕನ್ನಡ ಸಂಸ್ಕೃತಿಯಲ್ಲಿ ಬೆಳೆಸುವ ಹಂಬಲದಿಂದ ತಮ್ಮನ್ನು ಈ ಅಭಿಯಾನದಲ್ಲಿ ತೊಡಗಿಸಿಕೊಳ್ಳುತ್ತಿರುವ ತಂದೆ ತಾಯಂದಿರು ಸ್ತುತ್ಯಾರ್ಹರು. ಕನ್ನಡ ಕಾಯಕದ ಅಡಿಯಲ್ಲಿ, ಕರ್ನಾಟಕದಲ್ಲಿನ ಸರಕಾರಿ ಸಂಸ್ಥೆಗಳು ಮತ್ತು ಮಾಧ್ಯಮಗಳು ವಿದೇಶಗಳಲ್ಲಿನ ಕನ್ನಡದತ್ತ ತಮ್ಮ ದೃಷ್ಟಿಯನ್ನು ಕೇಂದ್ರೀಕರಿಸಿದ್ದಾರೆ. ಆದರೆ ಕರ್ನಾಟಕದಲ್ಲೇ ಕನ್ನಡದ ಸ್ಥಿತಿ ಚಿಂತನೀಯವಾಗಿರುವಾಗ, ಇದು ಬೇರಿಗೆ ಹುಳ ಹತ್ತಿರುವಾಗ ಹೂಗಳನ್ನು ಅರಳಿಸುವ ಅಥವಾ ಕೆಳಗೆ ತೂಗಾಡುತ್ತಿರುವ ಹಣ್ಣುಗಳನ್ನು ಬಾಚಿಕೊಳ್ಳುವ ಯತ್ನ ಎನ್ನಿಸುವುದು ಸಹಜ. ಹಾಗಾಗದಿರಲು, ಕರ್ನಾಟಕದಲ್ಲಿ ಕನ್ನಡದ ಅಭಿವೃದ್ಧಿ ಏಕೆ ಕುಂಠಿತವಾಗಿದೆ, ಅದಕ್ಕೆ ತೊಡಕಾಗಿರುವ ಅಂಶಗಳು ಯಾವವು, ಇವುಗಳನ್ನು ತಿಳಿದುಕೊಂಡರೆ ಸರಿಯಾದ ಪರಿಹಾರಗಳನ್ನು ರೂಪಿಸಿಕೊಳ್ಳಬಹುದು. ಈ ನಿಟ್ಟಿನಲ್ಲಿ ಶ್ರೀಯುತ ವಿವೇಕ ಅವರ ಲೇಖನ ಕಣ್ಣು ತೆರೆಸುವಂತಿದೆ.

ಆಸೆಯೇ ದುಃಖಕ್ಕೆ ಮೂಲವೇ?

ನನ್ನ ಮಗನಿಗೆ ೫ ವರುಷವಾಗಿದ್ದಾಗ ಒಂದು ಆಟಿಕೆಗಾಗಿ ಬೇಡಿಕೆಯಿಟ್ಟ. ಅದನ್ನು ನಾವು ಕೊಡಿಸಿದೆವು. ಮಾರನೇ ದಿನವಷ್ಟೇ ಅದೇ ಸರಣಿಯಲ್ಲಿಯ ಇನ್ನೊಂದು ಬೊಂಬೆ ಬೇಕೆಂದು ಹಠ ಶುರುವಾಯಿತು. ವಿಷಯ ಮರೆಸುವ ನನ್ನ ಯಾವುದೇ ಮಾಮೂಲಿನ ತಂತ್ರಗಳು ನಿಷ್ಪ್ರಯೋಜಕವಾಗಿ ಸಣ್ಣ ಅಳುಕ ಮುಂದುವರೆಯಿತು.

ಎಲ್ಲ ಆಸೆಗಳನ್ನು ಪೂರೈಸಬೇಕೇ? ಪೂರೈಸಿದಂತೆ ಆಸೆಯ ಬಳ್ಳಿ ಬೆಳೆಯುತ್ತಲೇ ಹೋಗುತ್ತದೆಯೇ? ಯಾರಿಗೆ ದುಃಖ? ಯಾರಿಗೆ ಕೋಪ? ಯಾರಿಗೆ ಮರುಕ? ಮಗುವಿನ ಮನಸ್ಸನ್ನು ನೋಯಿಸದೆ, ವಾದ-ಪ್ರತಿವಾದಗಳಿಗೆ ಎಡೆ ಕೊಡದೆ, ಜೀವನದ ಪಾಠಗಳನ್ನು ಕಲಿಸುವುದು ಹೇಗೆ? "ಸುಳ್ಳು" ತಂದೆ-ತಾಯಿಗಳಿಗೆ ಸಮರ್ಥ ಅಸ್ತ್ರವಾದಿತೇ? ಇಂದಿನ "ಬಿಳಿ ಸುಳ್ಳು" ನಾಳೆ ಬೆಳೆದು ಮುಳ್ಳು ಆದೀತೆ? ಈ ಪ್ರಶ್ನೆಗಳ ಮೇಲೆ ಅನುಭವದ ವಿಚಾರಗಳನ್ನು ಹಂಚಿಕೊಂಡಿದ್ದಾರೆ ಶೃತಿ ಅರವಿಂದ್.