ಬರೆಹ

Articles

ಬೆಳಕು ತೋರಿದ ಬದುಕು : ಹೆಲನ್ ಕೆಲರ್

ಹೆಲನ್ ಕೆಲನ್‍ರಂಥವರು ಹುಟ್ಟುವುದು ಸಾಯುವುದಕ್ಕಲ್ಲ – ಅಪ್ರತಿಮ ಸೇವೆ- ಸಾಧನೆಗಳಿಂದ ಅಮರರಾಗುವುದಕ್ಕಾಗಿ!
ಅವಳ ವೈವಿಧ್ಯಮಯ, ಸಾಹಸಪೂರ್ಣ, ವಾತ್ಸಲ್ಯಪೂರಿತ, ಜ್ಞಾನಕೌತೂಹಲಭರಿತ ಜೀವನ ಮತ್ತು ಸಾಧನೆಗಳನ್ನೂ, ಅವಳು ಮಾಡಿದ ಲೋಕಾಧಿಕ ಉಪಕಾರವನ್ನೂ ಸ್ಮರಿಸಲು ನೆರವಾಗುವಂತೆ, “ಬೆಳಕು ತೋರಿದ ಬದುಕು” ಎಂಬ ಸಂಕ್ಷಿಪ್ತ ವೃತ್ತಾಂತವೊಂದು ಇಲ್ಲಿದೆ.

ತೋಳಬಂದಿ ಮತ್ತು ಸೌಂದರ್ಯಸಾಧನೆ

ಮನುಷ್ಯ‌, ಹೆಂಗಸಾಗಲಿ ಗಂಡಸಾಗಲಿ, ತನ್ನ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು ಏನೇನೋ ಮಾಡುತ್ತಾನೆ.  ಇವುಗಳಲ್ಲಿ ಯಾವುದು ನಿಜವಾದ ಸೌಂದರ್ಯವರ್ಧಕ? ಯಾವುದು ಶಾಶ್ವತ? ಇದಕ್ಕೆ ೭ನೆ ಶತಮಾನದ, ವಿದ್ವಾಂಸನಾದ ಭರ್ತೃಹರಿಯ ಉತ್ತರ ಏನು?

ಮುಗ್ಧ ಮನಸ್ಸುಗಳ ಸಾಕ್ಷಾತ್ಕಾರವೇ ಸಾಕೇತ ಸಿದ್ಧಾಂತ, ಒಂದು ಸಂದೇಶ

[ಮೊನ್ನೆ ತಾನೆ ಕನ್ನಡ ಕಲಿಯ ಬಿತ್ತರಿಕೆ ಬಿಕಾಸ ೧೧-೨೦೨೩-೦೧ರಲ್ಲಿ ನಿಮಗೆ ಪರಿಚಯಿಸಿದ ಸಾಕೇತ ಸಿದ್ದಾಂತಕ್ಕೆ ಸ್ಪಂದಿಸಿ ಒಂದು ಸಂದೇಶವನ್ನು, ಲಲಿತ ಪ್ರಬಂಧವನ್ನು ಅನ್ನಿ, ಕಳಿಸಿದ್ದಾರೆ ರೂಪ ಮಂಜುನಾಥ. ಕರ್ನಾಟಕ ಸಾಂಸ್ಕೃತಿಕ ಸಂಘದ ಸುವರ್ಣ ಮಹೋತ್ಸವ‌ ಕಾರ್ಯಕ್ರಮದ ಕವಿಗೋಷ್ಠಿಯಲ್ಲಿ, ಕವನ ಓದಿದ ಮಕ್ಕಳ ಬಗ್ಗೆ, ಅವರನ್ನು ಬೆಳೆಸಿದ ತಾಯಿ ತಂದೆಯರ ಬಗ್ಗೆ, ಅರಳು ಮಲ್ಲಿಗೆ ಮತ್ತು ಗೋಕುಲ ಮಕ್ಕಳು ಎನ್ನುವ ಪುಟ್ಟ ಕನ್ನಡ ಸಾಂಸ್ಕೃತಿಕ ಸಮುದಾಯಗಳ ಬಗ್ಗೆ, ಹಾಗೂ ಸಾಕೇತ ಸಿದ್ಧಾಂತರ ಕವನಗಳನ್ನು ಪ್ರಕಟಿಸಿದ ಕನ್ನಡ ಕೂಟದ ಸ್ಮರಣ ಸಂಚಿಕೆಯ ಬಗ್ಗೆ, ತಮ್ಮ ಅನಿಸಿಕೆಗಳನ್ನು ಇಲ್ಲಿ ತೆರೆದಿಟ್ಟಿದ್ದಾರೆ. ]

ರೂಪ ಮಂಜುನಾಥ

ಕನ್ಸಡಕ್ಕೊಂದು ಸಾಕೇತ ಸಿದ್ಧಾಂತ

ಕನ್ನಡಕ್ಕೊಂದು

ಸಾಕೇತ ಸಿದ್ಧಾಂತ

ಏನಿದು ಸಾಕೇತ ಸಿದ್ಧಾಂತ?‌
ಕನ್ನಡ ಕೇವಲ ಒಂದು ವ್ಯಾವಹಾರಿಕ ಮಾಧ್ಯಮವೋ?‌ ಆಥವ ಅದಕ್ಕಿಂತ ಮಿಗಿಲಾದ ಮೌಲ್ಯ ಏನಾದರೂ ಅದರಲ್ಲಿ ಇದೆಯೆ?ಕನ್ನಡ ಕಲಿಯಲು ಅತ್ಯಂತ ಪರಿಣಾಮಕಾರಿ ವಿಧಾನ ಯಾವುದು?

 

ಸಮಾನತೆಯ ಹೆಸರಿನಲ್ಲಿ ಮಹಿಳೆ ಪುರುಷನಾಗುವುದು ಸೂಕ್ತವೇ?

ಇಂದು ಮಹಿಳಾ ದಿನಾಚರಣೆ. ಹಿಂದಿನಿಂದಲೂ ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಮಹಿಳೆ ಸಾಕಷ್ಟು ನೋವು ಅನುಭವಿಸಿರುವಳು. ಇಂದಿಗೂ ಸಹಾ ಹಳ್ಳಿಗಳಲ್ಲಿ ಮಹಿಳೆಗೆ ಸಂಪೂರ್ಣವಾದ ಸ್ವಾತಂತ್ಯ ಸಿಕ್ಕಿರುವುದಿಲ್ಲ. ನಗರಗಳಲ್ಲಿ ಒಂದು ಹೆಜ್ಜೆ ಮುಂದೆ ಹೋಗಿರುವೆವು. ಮಹಿಳೆಯ ಸಮಸ್ಯೆಯನ್ನು ಅರ್ಥಮಾಡಿಕೊಂಡು ಅವಳೊಂದಿಗೆ ಸಂವೇದನಾ ಶೀಲರಾಗಿ ವರ್ತಿಸುವದನ್ನು ಪುರುಷ ಸಮಾಜ ರೂಢಿಸಿಕೊಳ್ಳುವ ಅಗತ್ಯವಿದೆ.

ನಮ್ಮ ನಡುವಿದ್ದ ನಾಡೋಜ

ನಮ್ಮ ನಡುವಿದ್ದ ನಾಡೋಜ

[ ಇಂದು, ಡಿಸೆಂಬರ ೨೮, ಕನ್ನಡದ ಹೊಸ ಬೆಳಕು ಮೂಡಿದ ದಿನ. ಶ್ರೀನಿವಾಸ ಎಂಬ ಒಬ್ಬ ಹಳ್ಳಿಯ ಬಡ ಹುಡುಗ, ಹುಟ್ಟಿದ ದಿನ. ಎಲ್ಲ ಕಷ್ಟಗಳನ್ನೂ ಮೀರಿ, ತನ್ನ ಕಲಿಯುವ ಉತ್ಕಟತೆ, ಪುಸ್ತಕ ಪ್ರೇಮ, ಮತ್ತು ಹೊಸತನದ ಹಂಬಲಗಳಿಂದ ಒಬ್ಬ ಉತ್ಕೃಷ್ಟ ಸಂಶೋಧಕನಾಗಿ, ಸಂಶೋಧನೆಗೇ ಒಂದು ಹೊಸ ಆಯಾಮವನ್ನು ಜೋಡಿಸಿ, ನಾಡೋಜನಾಗಿ ಬೆಳೆದು ನಿಂತ ಕತೆ ಇದು. ಕನ್ನಡ ಕಲಿಗಳಿಗಷ್ಟೆ ಅಲ್ಲ,ಎಲ್ಲರಿಗೂ ಸ್ಫೂರ್ತಿ ನೀಡುವ,ಡಾ. ಶ್ರೀನಿವಾಸ ಹಾವನೂರರನ್ನು ಇದಕ್ಕಿಂತ ಹತ್ತಿರವಾಗಿ ಕಂಡು ಹೇಳಿದ ಕತೆ ನಿಮಗೆ ಬೇರೆ ಎಲ್ಲಿಯೂ ಸಿಗದು. – ಸಂ.]

ಶಂಖಣ್ಣನ ಹಣೆಬರಹ

ಚೆನ್ನುಡಿ

ಶಂಖಣ್ಣನ ಹಣೆಬರಹ

ಯಾವ ಮನೆತನದಲ್ಲಿ ಹುಟ್ಟಿದರೇನು? ಏನು ಕಲಿತರೇನು? ಏನು ಮಾಡಿದರೇನು?
ಮುಂದೆ ಏನಾಗುವುದು? ಎಲ್ಲವೂ ಹಣೆಬರಹ ಎಂದುಕೊಳ್ಳುವುದು ಸಾಮಾನ್ಯ. ವಿಶೇಷವಾಗಿ, ನಿರೀಕ್ಷಿಸಿದ್ದು ಆಗದಿದ್ದಾಗ, ಕೆಲವರಿಗೆ ಸಿರಿ, ಸಂಪತ್ತು, ಸೌಲಭ್ಯ, ಖ್ಯಾತಿ, ಹೀಗೆಲ್ಲ, ಪಾತ್ರರಿದ್ದರೂ ಸಿಗದಿದ್ದಾಗ, ಅಥವ ಅಪಾತ್ರರಿದ್ದರೂ ಅನಾಯಾಸವಾಗಿ ಸಿಕ್ಕಾಗ ಅಂದುಕೊಳ್ಳುವುದು ಹಣೆಬರಹ, ದೈವ, ಭಾಗ್ಯ, ಲಕ್ಕು, ಅಂತ! ಇದು ನಿಜವೋ, ಕೇವಲ ಸಮಾಧಾನಕ್ಕೋಸ್ಕರ ಹೇಳಿಕೊಳ್ಳುವ ಮಾತೋ? ಅಂತೂ ಒಂದಾನೊಂದು ಸಂದರ್ಭದಲ್ಲಿ ನಿಮಗೂ ಹೀಗೆ ಅನಿಸಿರಬಹುದು. ಎಲ್ಲವನ್ನೂ ಆದಂತೆ ಒಪ್ಪಿಕೊಂಡು ಕೂಡುವ ಜಾಯಮಾನ ಚಾಣಕ್ಯನದು ಅಲ್ಲ ಆದರೂ ಅವನು ಹೇಳಿದ್ದು ಹೀಗೆ:

ಹಳೆ-ಹೊಸ ತಲೆಮಾರುಗಳ ನಡುವೆ ದೀಪಾವಳಿ ಸಂಭ್ರಮ

ಹಳೆ-ಹೊಸ ತಲೆಮಾರುಗಳ ನಡುವೆ ದೀಪಾವಳಿ ಸಂಭ್ರಮ 
*** ವಿವೇಕ ಬೆಟ್ಕುಳಿ


ಆಧುನಿಕತೆ ಬೆಳೆದಂತೆ ನಮ್ಮ ಸಂಪ್ರದಾಯ, ನಂಬಿಕೆ, ಕುಟುಂಬ ವ್ಯವಸ್ಥೆ ಈ ಎಲ್ಲವುಗಳಲ್ಲಿ ಬದಲಾವಣೆಗಳು ಆಗುತ್ತಿವೆ. ಬದಲಾವಣೆಯೂ ಜಾಗತೀಕರಣದ ನಂತರದಲ್ಲಿ ಅತಿವೇಗದಿಂದ ಆಗುತ್ತಿರುವುದನ್ನು ಕಾಣಬಹುದಾಗಿದೆ. ಹಿಗೆಯೆ ಮುಂದುವರೆದರೆ ನಮ್ಮ ಮುಂದಿನ ಪೀಳಿಗೆಗೆ ಇಂದಿನ ಆಚರಣೆಗಳು ಕೇವಲ ಇತಿಹಾಸ ಏನಿಸಿಕೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲ. ಹಳೆ-ಹೊಸ ತಲೆಮಾರುಗಳ ಸಮ್ಮಿಲಿತ ಇಂದಿನ ಸಂದರ್ಭದಲ್ಲಿ ಹಬ್ಬಗಳನ್ನು ನಾವು ಸಂಭ್ರಮಿಸುತ್ತಿರುವುದು ವಿಶೇಷವಾಗಿದೆ.

ಚಾತಕ - ಕವಿಸಮಯ

ಚೆನ್ನುಡಿ

ಚಾತಕ - ಕವಿಸಮಯ

ಚಾತಕ, Clamator jacobinus, Jacobin cuckoo , pied cuckoo or pied crested cuckoo ಎಂದು ಸಾಮಾನ್ಯವಾಗಿ ಗುರುತಿಸಲ್ಪಟ್ಟ, ಒಂದು ಕೋಗಿಲ ಜಾತಿಯ ಪಕ್ಷಿ. ಇದಕ್ಕೆ ಶಾರಂಗ,  ಮಾತಂಗ,  ಸ್ತೋಕಕ ಎಂದು ಕೂಡ ಹೆಸರುಗಳು ಇವೆ.